22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಹತ್ತಕ್ಕೂ ಅಧಿಕ ತೆಂಗಿನ ಗಿಡಗಳನ್ನು ಸಂಪೂರ್ಣವಾಗಿ ನಾಶಗೊಳಿಸಿದೆ. ಇಲ್ಲಿನ ನಿವಾಸಿ ಜೋ ಸೆಫ್. ಪಿ.ಕೆ ಎಂಬವರ ತೋಟಕ್ಕೂ ಕಾಡಾನೆ ನುಗ್ಗಿದೆ, ಇಲ್ಲಿಯೂ ಅಡಕೆ ಹಾಗೂ ತೆಂಗಿನ ಗಿಡಗಳಿಗೆ ಹಾನಿಯುಂಟು ಮಾಡಿದೆ. ಇಲ್ಲಿ ಸಮೀಪದ ಇತರ ತೋಟಗಳಿಗೂ ಕಾಡಾನೆಗಳು ನುಗ್ಗುತ್ತಿದ್ದು ಕೃಷಿಗೆ ಹಾನಿಯುಂಟುಮಾಡುತ್ತಿದೆ. ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿ ನಲ್ಲಿದ್ದು  ಸಂಜೆಯಾಗುವಾಗಲೇ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿದೆ.ಹಗಲು ಹೊತ್ತಿನಲ್ಲಿಯೂ ಕಾಡಾನೆಗಳು ತೋಟಗಳ ಪರಿಸರದಲ್ಲಿ ಕಾಣಿಸುತ್ತಿದೆ. ಇದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.  ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ

Related posts

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!