23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಹತ್ತಕ್ಕೂ ಅಧಿಕ ತೆಂಗಿನ ಗಿಡಗಳನ್ನು ಸಂಪೂರ್ಣವಾಗಿ ನಾಶಗೊಳಿಸಿದೆ. ಇಲ್ಲಿನ ನಿವಾಸಿ ಜೋ ಸೆಫ್. ಪಿ.ಕೆ ಎಂಬವರ ತೋಟಕ್ಕೂ ಕಾಡಾನೆ ನುಗ್ಗಿದೆ, ಇಲ್ಲಿಯೂ ಅಡಕೆ ಹಾಗೂ ತೆಂಗಿನ ಗಿಡಗಳಿಗೆ ಹಾನಿಯುಂಟು ಮಾಡಿದೆ. ಇಲ್ಲಿ ಸಮೀಪದ ಇತರ ತೋಟಗಳಿಗೂ ಕಾಡಾನೆಗಳು ನುಗ್ಗುತ್ತಿದ್ದು ಕೃಷಿಗೆ ಹಾನಿಯುಂಟುಮಾಡುತ್ತಿದೆ. ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿ ನಲ್ಲಿದ್ದು  ಸಂಜೆಯಾಗುವಾಗಲೇ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿದೆ.ಹಗಲು ಹೊತ್ತಿನಲ್ಲಿಯೂ ಕಾಡಾನೆಗಳು ತೋಟಗಳ ಪರಿಸರದಲ್ಲಿ ಕಾಣಿಸುತ್ತಿದೆ. ಇದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.  ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya
error: Content is protected !!