37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

ಧರ್ಮಸ್ಥಳ: ಧರ್ಮಸ್ಥಳದಿಂದ ಮುಳಿಕ್ಕಾರು ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನರು, ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸುಮಾರು 200 ಕ್ಕಿಂತಲೂ ಹೆಚ್ಚು ಮನೆಗಳನ್ನು ಹೊಂದಿರುವ ಮುಳಿಕ್ಕಾರು ಪ್ರದೇಶಕ್ಕೆ ಹೋಗಲು ರಸ್ತೆಯ ಮಧ್ಯೆ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ಇದ್ದು, ಉಳಿದ ಕಡೆ ನಡೆದುಕೊಂಡು ಹೋಗಲು ಕಷ್ಟ ಪಡುವ ಸನ್ನಿವೇಶ ಇದೆ. ರಿಕ್ಷಾ, ಜೀಪುಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ತೆರಳಲು ಅಸಾಧ್ಯವಾಗಿದೆ.

ಹರಸಾಹಸ ಪಟ್ಟು ಈ ರಸ್ತೆಯಿಂದ ಜೀಪುಗಳು ಸಾಗಿದರೂ ಕೆಲವು ಕಡೆ ಹೂತು ಹೋಗಿ ಇನ್ನೊಂದು ವಾಹನದಿಂದ ಅಥವಾ ಜನರು ಎಳೆಯಬೇಕಾದ ಪರಿಸ್ಥಿತಿ ಇದೆ.

ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.

Related posts

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya
error: Content is protected !!