22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

ಧರ್ಮಸ್ಥಳ: ಧರ್ಮಸ್ಥಳದಿಂದ ಮುಳಿಕ್ಕಾರು ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನರು, ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸುಮಾರು 200 ಕ್ಕಿಂತಲೂ ಹೆಚ್ಚು ಮನೆಗಳನ್ನು ಹೊಂದಿರುವ ಮುಳಿಕ್ಕಾರು ಪ್ರದೇಶಕ್ಕೆ ಹೋಗಲು ರಸ್ತೆಯ ಮಧ್ಯೆ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ಇದ್ದು, ಉಳಿದ ಕಡೆ ನಡೆದುಕೊಂಡು ಹೋಗಲು ಕಷ್ಟ ಪಡುವ ಸನ್ನಿವೇಶ ಇದೆ. ರಿಕ್ಷಾ, ಜೀಪುಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ತೆರಳಲು ಅಸಾಧ್ಯವಾಗಿದೆ.

ಹರಸಾಹಸ ಪಟ್ಟು ಈ ರಸ್ತೆಯಿಂದ ಜೀಪುಗಳು ಸಾಗಿದರೂ ಕೆಲವು ಕಡೆ ಹೂತು ಹೋಗಿ ಇನ್ನೊಂದು ವಾಹನದಿಂದ ಅಥವಾ ಜನರು ಎಳೆಯಬೇಕಾದ ಪರಿಸ್ಥಿತಿ ಇದೆ.

ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya
error: Content is protected !!