25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

ಧರ್ಮಸ್ಥಳ: ಧರ್ಮಸ್ಥಳದಿಂದ ಮುಳಿಕ್ಕಾರು ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನರು, ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸುಮಾರು 200 ಕ್ಕಿಂತಲೂ ಹೆಚ್ಚು ಮನೆಗಳನ್ನು ಹೊಂದಿರುವ ಮುಳಿಕ್ಕಾರು ಪ್ರದೇಶಕ್ಕೆ ಹೋಗಲು ರಸ್ತೆಯ ಮಧ್ಯೆ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ಇದ್ದು, ಉಳಿದ ಕಡೆ ನಡೆದುಕೊಂಡು ಹೋಗಲು ಕಷ್ಟ ಪಡುವ ಸನ್ನಿವೇಶ ಇದೆ. ರಿಕ್ಷಾ, ಜೀಪುಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ತೆರಳಲು ಅಸಾಧ್ಯವಾಗಿದೆ.

ಹರಸಾಹಸ ಪಟ್ಟು ಈ ರಸ್ತೆಯಿಂದ ಜೀಪುಗಳು ಸಾಗಿದರೂ ಕೆಲವು ಕಡೆ ಹೂತು ಹೋಗಿ ಇನ್ನೊಂದು ವಾಹನದಿಂದ ಅಥವಾ ಜನರು ಎಳೆಯಬೇಕಾದ ಪರಿಸ್ಥಿತಿ ಇದೆ.

ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.

Related posts

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!