25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. 

 ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ  ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ,  ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.

ಸುಮಾರು 250 ಅಧಿಕ ವಿದ್ಯಾರ್ಥಿಗಳು  ಸಾಂಪ್ರದಾಯಿಕ  ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ  ಪ್ರಭಾಕರ್, ಧರ್ಮೇಂದ್ರ ಕುಮಾರ್‌,  ನಿತಿನ್‌,  ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
error: Content is protected !!