April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. 

 ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ  ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ,  ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.

ಸುಮಾರು 250 ಅಧಿಕ ವಿದ್ಯಾರ್ಥಿಗಳು  ಸಾಂಪ್ರದಾಯಿಕ  ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ  ಪ್ರಭಾಕರ್, ಧರ್ಮೇಂದ್ರ ಕುಮಾರ್‌,  ನಿತಿನ್‌,  ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!