23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. 

 ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ  ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ,  ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.

ಸುಮಾರು 250 ಅಧಿಕ ವಿದ್ಯಾರ್ಥಿಗಳು  ಸಾಂಪ್ರದಾಯಿಕ  ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ  ಪ್ರಭಾಕರ್, ಧರ್ಮೇಂದ್ರ ಕುಮಾರ್‌,  ನಿತಿನ್‌,  ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!