ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿಯನ್ನು
ಸುಮಂತ್ ಕುಮಾರ್ ಜೈನ್ ಅವರಿಗೆ ನೀಡಿ ಗೌರವಿಸಲಾಗಿದೆ.

ರಸಾಯನ ವಿಜ್ಞಾನ ಪ್ರಾಧ್ಯಾಪಕರಾಗಿ, ನೀಟ್, ಜೆಇಇ ಟ್ರೈನರ್ ಆಗಿ,ಎಕ್ಸೆಲ್ ಕಾಲೇಜಿನ ಯಶಸ್ವಿನ ಪಯಣದಲ್ಲಿ ಪ್ರಾಮಾಣಿಕತೆ, ಪರಿಶ್ರಮ ಸೇವೆಯಿದೆ.

ಶೈಕ್ಷಣಿಕ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಇಗಾಗಲೇ ಹಲವಾರು ಪ್ರಶಸ್ತಿ,ಸಮ್ಮಾನಗಳು ದೊರೆತಿದೆ.

ಈ ಸಂದರ್ಭದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ‌ಸಂಪಾದಕ ರವಿ ಹೆಗಡೆ,ಸಂಪಾದಕ ಅಜಿತ್ ಹನಮಕ್ಕನವರ್ ಉಪಸ್ಥಿತರಿದ್ದರು.

Leave a Comment

error: Content is protected !!