September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.


ಧರ್ಮಸ್ಥಳದಿಂದ ದಾವಣಗೆರೆಗೆ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕಾರನ್ನು ನಿಲ್ಲಿಸಿ ಕಾರಿನಲ್ಲಿ ಇದ್ದವರೆಲ್ಲರೂ ಕೆಳಗೆ ಇಳಿದು ಸಮೀಪದಲ್ಲಿದ್ದ ಸಂದರ್ಭ ಮಂಗಳೂರಿಗೆ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನ‌ರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದ್ದು.

ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ.

ಗುಂಡ್ಯದ ಪರಶುರಾಮ ಕ್ರೈನ್ ಮೂಲಕ ಕಾರನ್ನು ಹೊರತೆಗೆಯಲಾಯಿತು. ಸ್ಥಳಕ್ಕೆ ಸಂಚಾರಿ ಪೊಲೀಸರು ಹಾಗೂ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Related posts

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!