22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.


ಧರ್ಮಸ್ಥಳದಿಂದ ದಾವಣಗೆರೆಗೆ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕಾರನ್ನು ನಿಲ್ಲಿಸಿ ಕಾರಿನಲ್ಲಿ ಇದ್ದವರೆಲ್ಲರೂ ಕೆಳಗೆ ಇಳಿದು ಸಮೀಪದಲ್ಲಿದ್ದ ಸಂದರ್ಭ ಮಂಗಳೂರಿಗೆ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನ‌ರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದ್ದು.

ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ.

ಗುಂಡ್ಯದ ಪರಶುರಾಮ ಕ್ರೈನ್ ಮೂಲಕ ಕಾರನ್ನು ಹೊರತೆಗೆಯಲಾಯಿತು. ಸ್ಥಳಕ್ಕೆ ಸಂಚಾರಿ ಪೊಲೀಸರು ಹಾಗೂ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!