39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

ಬೆಳ್ತಂಗಡಿ: ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ ಎಂದು ಲಾಯಿಲ ಕೈಗಾರಿಕಾ ವಸಾಹತು ಉಳಿಸಿ ಸಮಿತಿಯ ಸಂಚಾಲಕ ಪ್ರಶಾಂತ್‌ ಸರಕಾರ ಅಧಿಕಾರಿಗಳನ್ನು ಒತ್ತಾಯಿಸಿದರು. ಲಾಯಿಲ ಕಾಶಿಬೆಟ್ಟುವಿನಲ್ಲಿ ಕೈಗಾರಿಕಾ ವಸಾಹತಿನ ಎದುರು ಸಂಕಷ್ಟದಲ್ಲಿರುವ ಉದ್ಯಮಿಗಳು ಶುಕ್ರವಾರ ಅಗೆದು ಹಾಕಿರುವ ಹೆದ್ದಾರಿಯ ಬದಿಯಲ್ಲಿ ನಡೆಸಿದ ಸಾಂಕೇತಿಕ ಪ್ರತಿಭಟನೆಯನ್ನು ಉದ್ದೇಶಿ ಅವರು ಮಾತನಾಡಿದರು.

ಕೈಗಾರಿಕಾ ವಸಾಹತುವಿಗೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ ಅದನ್ನು ಸರಿಪಡಿಸಿಕೊಡುವಂತೆ ಹಾಗೂ ಮಳಿಗೆಗಾಲಿಗೆ ಕೆಸರು ನೀರು ನುಗ್ಗದಂತೆ ಕ್ರಮ ಕೈಗೊಳ್ಳುವಂತೆ ಕಳೆದ ಹಲವು ತಿಂಗಳಿಂದ ವಿನಂತಿಸುತ್ತಿದ್ದೇವೆ ಆದರೆ ಶಾಸಕರು ಅಧಿಕಾರಿಗಳು ಯಾರೂ ಸ್ಪಂದಿಸುತ್ತಿಲ್ಲ. ಸರಕಾರದ ಅಧಿಕಾರಿಗಳ ಗಮನ ಸೆಳೆಯಲು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಇನ್ನು ವ್ಯವಸ್ಥೆ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಹೆದ್ದಾರಿ ಬಂದ್‌ ಮಾಡಿ ಹೋರಾಟ ನಡೆಸಬೇಕಾಗಬಹುದು ಅಂದರು. ಸಾಂಕೇತಿಕ ಪ್ರತಿಭಟನೆಯಲ್ಲಿ ಉದ್ಯಮಿ ವೆಂಕಟ್ರಮಣ ಭಟ್, ಮುಸ್ತಾಕ್ ಅಹಮ್ಮದ್, ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಹಾಗೂ ಇತರರು ಭಾಗವಹಿಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾ ಅಧಿಕಾರಿ ಭವನಿ ಶಂಕ‌ರ್ ಅವರು ಭೇಟಿ ನೀಡಿ ಪ್ರತಿಭಟನಾ ಕಾರರೊಂದಿಗೆ ಮಾತುಕತೆ ನಡೆಸಿದರು. ತಾತ್ಕಾಲಿಕವಾಗಿ ಕೈಗಾರಿಕಾ ವಸಾಹತುವಿನ ಒಳಗಿರುವ ಚರಂಡಿಗಳನ್ನು ಸರಿಪಡಿಸಲು ಲಾಯಿಲ ಗ್ರಾ.ಪಂ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ರಸ್ತೆಕಾಮಗಾರಿಯಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಪ್ರತಿಭಟನಾಕಾರರು ರಸ್ತೆಯಲ್ಲಿ ದೊಡ್ಡ ಹೊಂಡದಲ್ಲಿ ವಾಹನಗಳು ಬಿದ್ದಿ ಮೇಲೇಳುತ್ತಿರುವ ದುಸ್ಥಿತಿ ನೋಡಿ ಹೊಂಡಕ್ಕೆ ಕಲ್ಲುಗಳನ್ನು ಹಾಕಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!