23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮವು ಆಗಸ್ಟ್ 9ರಂದು ಜರುಗಿತು. ಕಾರ್ಯಕ್ರಮಕ್ಕೆ ಮೂಡಬಿದ್ರೆ ನ್ಯಾಯವಾದಿಗಳಾದ ಶ್ವೇತಾ ಜೈನ್ ಭಾಗವಹಿಸಿ ಮಾತನಾಡುತ್ತಾ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ ವ್ಯವಹಾರ, ರಾಜಕಾರಣ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ ಎಂದು ಶುಭಹಾರೈಸಿದರು.

ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ವಿದ್ಯಾರ್ಥಿ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಬೋಧಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ನಾಯಕರಿಗೆ ಗುರುತು ಪತ್ರ ನೀಡಿ ಗೌರವಿಸಲಾಯಿತು. ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿನಿ ಆತ್ಮಿ ಅತಿಥಿ ಪರಿಚಯ ಮಾಡಿ, ಅನುಶ್ರೀ ನಿರೂಪಿಸಿ, ಯುಕ್ತಾ ವಂದಿಸಿದರು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya
error: Content is protected !!