22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಪ್ರಮುಖ ಸುದ್ದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಮಾಸಿಕ 20 ಸಾವಿರ ರೂ. ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ತರಬೇತಿ ಕೊಡಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿನಿಯರಿಗೆ ಪತ್ರಕರ್ತೆಯರಾಗುವಂತೆ ಸಜ್ಜುಗೊಳಿಸುವುದು ಅಕಾಡೆಮಿಯ ಉದ್ದೇಶ.
ಪ್ರಸಕ್ತ ಸಾಲಿನಲ್ಲಿ ಐವರು ವಿದ್ಯಾರ್ಥಿನಿಯರಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ 2೦ ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ. ಕರ್ನಾಟಕದ ಯಾವುದೇ ಪತ್ರಿಕೋದ್ಯಮ ವಿಷಯದಲ್ಲಿ ” ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವವರಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿನಿಯರು ಆ.26ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೊ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakame- [email protected]ಗೆ ಇ-ಮೇಲ್ ಮೂಲಕ ಕಳುಹಿಸಬೇಕು.
28 ವರ್ಷದೊಳಗಿನವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಗೆ ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ ಎಂದು ಕರ್ನಾಟಕ ಮಾಧ್ಯಮ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
error: Content is protected !!