23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

ಬೆಳ್ತಂಗಡಿ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಸತತವಾಗಿ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮವು ನಡೆಯಿತು.

ಬೆಳ್ತಂಗಡಿ ತಾಲೂಕು ಗೌಡರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಮಕ್ಕಳನ್ನು ವೇದಿಕೆಗೆ ಕರೆದು ಅವರ ಪ್ರತಿಭೆಯನ್ನು ಗುರುತಿಸುವ ಕಾರ್ಯವನ್ನು ಸಂತೋಷ ವ್ಯಕ್ತಪಡಿಸಿದರು ಸ್ವಜಾತಿ ಬಾಂಧವರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕಿ ಶ್ರೀಮತಿ ಮೋಹನಾಂಗಿ ನೆರವೇರಿಸಿ ಆಟಿ ತಿಂಗಳ ಮಹತ್ವವನ್ನು, ಆಟಿತಿಂಗಳ ತಿನಿಸುಗಳ ಬಗ್ಗೆ ಮಾಹಿತಿಯನ್ನು ನೀಡಿದರು, ಹಿಂದಿನ ಕಾಲದಲ್ಲಿ ಯಾವ ರೀತಿಯಲ್ಲಿ ಆಚಾರ ವಿಚಾರಗಳನ್ನು ಹೇಗೆ ನಡೆಸುತ್ತಿದ್ದರು ಎಂಬ ವಿಚಾರವನ್ನು ತಿಳಿಸಿದರು.

ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಚೆ ಅವರು ನಡ ಗ್ರಾಮದ ಮಹಿಳಾ ಸಂಘಟನೆಯ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿ ಇದೇ ತಿಂಗಳು 18ನೇ ತಾರೀಕಿನಂದು ನಡೆಯುವ ಗೌಡರ ಕೆಸರ್ ಗಮ್ಮತ್ತು ಕ್ರೀಡಾಕೂಟದ ಬಗ್ಗೆ ಮಾಹಿತಿಯನ್ನು ನೀಡಿದರು.

ಮಹಿಳಾ ವೇದಿಕೆಯ ಅಧ್ಯಕ್ಷರು ಸೌಮ್ಯ ಲತಾ ಯತೀಶ ಗೌಡ ಗೌರವಾಧ್ಯಕ್ಷರು ಶ್ರೀಮತಿ ಮಮತಾ ಶ್ರೀನಾಥ್ ಪ್ರಮುಖರಾದ ರತ್ನಾವತಿ ಲೋಕೇಶ್ ತಾಲೂಕು ಸಮಿತಿಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ತಾಲೂಕು ಸಮಿತಿಯ ನಿರ್ದೇಶಕರಾದ ವಸಂತಗೌಡ ವಿ ಜಿ ಕೊಯ ಗುಡ್ಡೆ ಉಪಸ್ಥಿತರಿದ್ದರು. ನಡದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀಮತಿ ರಾಜಿವಿ ಇವರ ನಿಸ್ವಾರ್ಥ ಸೇವೆಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು

Related posts

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya
error: Content is protected !!