30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕೀಯಾ ಕಂಪನಿಯ KA-70-M-4209 ಸಂಖ್ಯೆಯ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬಾತ ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ನಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಮಾಲೀಕ ಆಗಮಿಸಿದ್ದಾನೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮೋಹನ್ ಕಲ್ಮಂಜ ಮಹಿಳೆಗೆ ಸಾರ್ವಜನಿಕರ ಮುಂದೆ ಕ್ಷಮೆ ಕೇಳಿದ್ದಾನೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ಮಾಲೀಕ ಮೋಹನ್ ಕಲ್ಮಂಜನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ

.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!