25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕೀಯಾ ಕಂಪನಿಯ KA-70-M-4209 ಸಂಖ್ಯೆಯ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬಾತ ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ನಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಮಾಲೀಕ ಆಗಮಿಸಿದ್ದಾನೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮೋಹನ್ ಕಲ್ಮಂಜ ಮಹಿಳೆಗೆ ಸಾರ್ವಜನಿಕರ ಮುಂದೆ ಕ್ಷಮೆ ಕೇಳಿದ್ದಾನೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ಮಾಲೀಕ ಮೋಹನ್ ಕಲ್ಮಂಜನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ

.

Related posts

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya
error: Content is protected !!