26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್, ರಾಘವೇಂದ್ರ ಕುಡ್ವರವರ ನಿರ್ಮಾಣದ ದಸ್ಕತ್ ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.

ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.
ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ, ನೀರಜ್ ಕುಂಜರ್ಪ, ಮಿಥುನ್ ರಾಜ್, ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.
ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!