27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.

ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ
ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!