ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ನವರಿಂದ
ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.
ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ

ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದಕಾಮಗಾರಿ ಆರಂಭಗೊಳ್ಳಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Leave a Comment

error: Content is protected !!