22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ನವರಿಂದ
ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.
ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ

ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದಕಾಮಗಾರಿ ಆರಂಭಗೊಳ್ಳಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya
error: Content is protected !!