32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.11ರಂದು ಸಮೃದ್ಧಿ ಸಭಾಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.162 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.92.91 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸದಸ್ಯರಿಗೆ 14% ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಶ್ರೀಮತಿ ವಾಣಿ ಆರ್ ಬಳ್ಳಾಲ್, ಅತುಲ್ ಕೃಷ್ಣ ರವರನ್ನು ಸನ್ಮಾನಿಸಲಾಯಿತು.

ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸ್ಥಳೀಯ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸಂಘದ ಸಾಲಗಾರ ಸದಸ್ಯರಿಗೆ ಮರಣ ಸಾಂತ್ವನ ನಿಧಿಯನ್ನು ಅನುಷ್ಠಾನಕ್ಕೆ ತರಲಾಯಿತು. ಹಾಗೂ ಮೈಕ್ರೋ ಎಟಿಎಂ ಅನ್ನು ಬಿಡುಗಡೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಸಂಘದ ಉಪಾಧ್ಯಕ್ಷರಾದ ನರೇಂದ್ರ ಕುಮಾರ್ , ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಎ., ನಿರ್ದೇಶಕರಾದ ಸಂತೋಷ್ ಶೆಟ್ಟಿ, ರವಿಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿ.ಸಿ., ಉಮೇಶ್, ಶ್ರೀಮತಿ ಉಷಾ, ಶ್ರೀಮತಿ ಸುನಂದ, ನವೀನ, ವಲಯ ಮೇಲ್ವಿಚಾರಕರು ಸುದರ್ಶನ್ ಉಪಸ್ಥಿತರಿದ್ದರು.

ಅಂಡಿಂಜೆ ಸರಕಾರಿ ಉನ್ನತಿಕರಿಸಿದ ಶಾಲಾ ಮುಖ್ಯ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು. ನಿರ್ದೇಶಕರಾದ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ, ನಾರಾಯಣ ಮೂಲ್ಯ ಧನ್ಯವಾದವಿತ್ತರು

.

Related posts

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya
error: Content is protected !!