24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕೀಯಾ ಕಂಪನಿಯ KA-70-M-4209 ಸಂಖ್ಯೆಯ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬಾತ ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ನಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಮಾಲೀಕ ಆಗಮಿಸಿದ್ದಾನೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮೋಹನ್ ಕಲ್ಮಂಜ ಮಹಿಳೆಗೆ ಸಾರ್ವಜನಿಕರ ಮುಂದೆ ಕ್ಷಮೆ ಕೇಳಿದ್ದಾನೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ಮಾಲೀಕ ಮೋಹನ್ ಕಲ್ಮಂಜನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ

.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!