April 2, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕೀಯಾ ಕಂಪನಿಯ KA-70-M-4209 ಸಂಖ್ಯೆಯ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬಾತ ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ನಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಮಾಲೀಕ ಆಗಮಿಸಿದ್ದಾನೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮೋಹನ್ ಕಲ್ಮಂಜ ಮಹಿಳೆಗೆ ಸಾರ್ವಜನಿಕರ ಮುಂದೆ ಕ್ಷಮೆ ಕೇಳಿದ್ದಾನೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ಮಾಲೀಕ ಮೋಹನ್ ಕಲ್ಮಂಜನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ

.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!