September 6, 2026
ತಾಲೂಕು ಸುದ್ದಿ

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ನವರಿಂದ
ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.
ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ

ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದಕಾಮಗಾರಿ ಆರಂಭಗೊಳ್ಳಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya
error: Content is protected !!