30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕೀಯಾ ಕಂಪನಿಯ KA-70-M-4209 ಸಂಖ್ಯೆಯ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬಾತ ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ನಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಮಾಲೀಕ ಆಗಮಿಸಿದ್ದಾನೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮೋಹನ್ ಕಲ್ಮಂಜ ಮಹಿಳೆಗೆ ಸಾರ್ವಜನಿಕರ ಮುಂದೆ ಕ್ಷಮೆ ಕೇಳಿದ್ದಾನೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ಮಾಲೀಕ ಮೋಹನ್ ಕಲ್ಮಂಜನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ

.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!