23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

ಉಜಿರೆ :. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಹಾಗೂ ಎಕ್ಸೆಕ್ಯುಟಿವ್ ಹೆಡ್ ಟೀಚರ್ ಆಗಿರುವ ಶ್ರೀ ಐಯನ್ ತೊಮಸ್ ಭೇಟಿ ನೀಡಿ ತಮ್ಮ ಮಂಗಳೂರು ಪ್ರವಾಸದ ಅನುಭವಗಳನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ನೃತ್ಯಗಳಲ್ಲಿ ಒಂದಾದ ಭರತನಾಟ್ಯ, ತುಳುನಾಡ ಕಲೆಗಳಾದ ಯಕ್ಷಗಾನ, ಪಾಡ್ದನ, ತುಳು ಪದ್ಯ, ಕರಕುಶಲ ವಸ್ತುಗಳ ಪ್ರದರ್ಶನಗಳನ್ನು ವಿದ್ಯಾರ್ಥಿಗಳಿಂದ ಮಾಡಲಾಯಿತು.

ಭೇಟಿಯ ಕಾರ್ಯಕ್ರಮದಲ್ಲಿ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಕರೆಸ್ಪಂಡೆಂಟ್ ಶ್ರೀಮತಿ ಶೃತ ಜಿತೇಶ್, ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಜೋಯ್ ಜೀವನ್ ರೈ, ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ಸಂಯೋಜಕಿ ಶ್ರೀಮತಿ ಉಷಾ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ಎಮ್ ರಾವ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಶೈಕ್ಷಣಿಕ ವರದಿಯನ್ನು ಪ್ರಸ್ತುತಿ ಪಡಿಸಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya
error: Content is protected !!