July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ವತಿಯಿಂದ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಚುಟುಕು ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಪದಗ್ರಹಣ ಸಮಾರಂಭದಲ್ಲಿ ಭಜನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶೇಷ ಸಾಧನೆಗಾಗಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಮಾನ್ಯ ಇವರನ್ನು ಸನ್ಮಾನಿಸಲಾಯಿತು,

ಸಣ್ಣ ವಯಸ್ಸಿನಲ್ಲಿ ಹಲವಾರು ಸಾಧನೆಯನ್ನು ಮಾಡಿ ಬಹುಮುಖ ಪ್ರತಿಭೆಯಾಗಿ ಸಮಾಜಕ್ಕೆ ಸ್ಪೂರ್ತಿಯಾಗಿದ್ದಾರೆ.

ಇವರ ಸಾಧನೆಯನ್ನು ಗುರುತಿಸಿ ಆಮಂತ್ರಣ ಪರಿವಾರ ವಿಜಯಕುಮಾರ್ ಜೈನ್ ಇವರ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು,

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಪ್ರವೀಣ್ ಕೋಡಿಯಾಲ್ ಬೈಲ್, ಹಿರಿಯರಾದ ಬಿ ಭುಜಬಲಿ ಧರ್ಮಸ್ಥಳ,ಜಾನಪದ ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಧರ್ಮಸ್ಥಳ, ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ,ಪ್ರಣವ್ ಸಭಾಂಗಣದ ಮಾಲಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya
error: Content is protected !!