July 23, 2026
ಪ್ರತಿಭಟನೆಪ್ರಮುಖ ಸುದ್ದಿ

ಬೆಂಗಳೂರು ಚಲೋ ದಲ್ಲಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರು ಭಾಗಿ

ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಧರಣಿ ಸತ್ಯಾಗ್ರಹದಲ್ಲಿ ಬೆಳ್ತಂಗಡಿ ತಾಲೂಕಿನ 50 ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡು ಬೆಂಬ ಸೂಚಿಸಿದರು.
ರಾಜ್ಯದ ಶಿಕ್ಷಕರ ಬೇಡಿಕೆಗಳೇನು?
1) 2017 ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಿ,ಪದವಿ ಪೂರ್ಣಗೊಳಿಸಿರುವ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು ಪದನಾಮೀಕರಿಸುವುದು.
2) ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು.
3)ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.
ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಈಗಾಗಲೇ ತಾಲೂಕು, ಜಿಲ್ಲಾ ಹಂತದಲ್ಲಿ ಸರಕಾರಕ್ಕೆ ಮನವಿ ಅಭಿಯಾನ ನಡೆಸಿದ್ದು,ಅಂತಿಮವಾಗಿ ಇಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಧರಣಿಯಲ್ಲಿ ಸುಮಾರು ಒಂದು ಲಕ್ಷದಷ್ಟು ಶಿಕ್ಷಕರು ಭಾಗಿಯಾಗಿ ಸರಕಾರದ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.ಬೆಳ್ತಂಗಡಿ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಎಚ್.ಕೆ,ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್ ನೇತೃತ್ವದಲ್ಲಿ, ಜಿಲ್ಲಾ ಖಜಾಂಚಿ ರಾಜೇಶ್ ನೆಲ್ಯಾಡಿ,ಜಿಲ್ಲಾ ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ,ತಾಲೂಕಿನ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮಂಗಳಾ,ಕೆ,ಸಹಕಾರ್ಯದರ್ಶಿ ದಿನೇಶ್ ನಾಯಕ್ ಸೇರಿದಂತೆ ಅನೇಕ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!