September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಬಂಟರ ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವ ಅಗತ್ಯತೆ ಇದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳ ಆಯೋಜನೆ ಬಹಳ ಅರ್ಥಪೂರ್ಣವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಠಲ ಶೆಟ್ಟಿ “ಶ್ರದ್ಧಾ” ಲಾಯಿಲ, ವಸಂತ ಶೆಟ್ಟಿ “ಶ್ರದ್ಧಾ” ಶುಭ ಹಾರೈಸಿದರು. ಸದಾನಂದ ಕರ್ನೊಡಿ, ಪುಷ್ಪ ಶೆಟ್ಟಿ ಪರಂಟಾಜೆ, ಮೋನಪ್ಪ ಶೆಟ್ಟಿ ಎಣಿಂಜೆ ವೇದಿಕೆಯಲ್ಲಿದ್ದರು. ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಹಾಗೂ ಬಂಟ ಭಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಗ್ರಾಮದ ವಿವಿಧ ಮನೆಯವರು ತಯಾರಿಸಿ ತಂದಿದ್ದ ಸುಮಾರು 30 ಬಗೆಯ ವಿವಿಧ ಆಹಾರ ಖಾಧ್ಯಗಳ ಸವಿಯನ್ನು ಸಭೆಯಲ್ಲಿ ಸೇರಿದ್ದವರು ಸವಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಾಪಕ ಸುರೇಶ್ ಶೆಟ್ಟಿ ಕೊಡೈಲು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ಎಣಿಂಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು. ಪ್ರಸಾದ್‌ ಶೆಟ್ಟಿ ಎಣಿಂಜೆ ಧನ್ಯವಾದವಿತ್ತರು.

Related posts

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!