ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ ಆ. 11 ರಂದು ಶಾರದಾ ಮಂಟಪ ಉಜಿರೆಯಲ್ಲಿ‌ ನಡೆಯಿತು.


ವಿಶ್ವ ಹಿಂದೂ ಪರಿಷದ್ ನ ಷಷ್ಠಿ ಪೂರ್ತಿ ಕಾರ್ಯಕ್ರಮವು ಸೆ.01 ರಂದು ನಿಗದಿ ಪಡಿಸಿದ್ದು ಈ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಸಂಘಟನೆಯ ಪ್ರಮುಖರನ್ನು ಸೇರಿಸಿ ತೀರ್ಮಾಣಿಸಲಾಯಿತು.


ಈ ಸಮಾಲೋಚನಾ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾನ್ಯ ಸಂಘ ಚಾಲಕರು ವಿನಯ ಚಂದ್ರ ಉಜಿರೆ ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ,ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಸುಬ್ರಹ್ಮಣ್ಯ ಅಗರ್ತ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳು, ಮೋಹನ್ ಬೆಳ್ತಂಗಡಿ ಕಾರ್ಯದರ್ಶಿ ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡ, ಸಂತೋಷ್ ಅತ್ತಾಜೆ ಸಂಯೋಜಕರು ಬಜರಂಗದಳ ಬೆಳ್ತಂಗಡಿ ಪ್ರಖಂಡ, ರಮೇಶ್ ಧರ್ಮಸ್ಥಳ ವಿ.ಹಿಂ.ಪ. ಗೋರಕ್ಷಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಅನಂತು ಉಜಿರೆ ಗೋ ರಕ್ಷಾ ಪ್ರಮುಖ್ ಬಜರಂಗದಳ ಬೆಳ್ತಂಗಡಿ ಪ್ರಖಂಡ, ನಾಗೇಶ್ ಕಲ್ಮಂಜ ವಿ.ಹಿಂ.ಪ.ಪ್ರಸಾರ ಪ್ರಚಾರ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಪ್ರಶಾಂತ್ ಕೊಕ್ಕಡ ಸಹ ಸಂಯೋಜಕರು ಬಜರಂಗದಳ‌ ಬೆಳ್ತಂಗಡಿ ಪ್ರಖಂಡ, ಅಶೋಕ್ ಕಳೆಂಜ ಸತ್ಸಂಗ ಪ್ರಮುಖ್ ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ, ವಿನೋದ್ ಮದ್ದಡ್ಕ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಶ್ರೀಮತಿ ಕಾವ್ಯ ಬೆಳ್ತಂಗಡಿ ಮಾತೃಮಂಡಳಿ ಬೆಳ್ತಂಗಡಿ ಪ್ರಖಂಡ, ತಿಮ್ಮಪ್ಪ ಗೌಡ ಬೆಳಾಲು, ಸೀತಾರಾಮ್ ಬೆಳಾಲ್ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದ.ಕನ್ನಡ. ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!