July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

ವೇಣೂರು: ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆ 11ರಂದು ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಶುಭಕರ್ ಸಾವ್ಯ ವಹಿಸಿದ್ದರು.

ಉದ್ಘಾಟನೆಯನ್ನು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಅಧ್ಯಕ್ಷರಾದ ಮಂಜಪ್ಪ ಪೂಜಾರಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್, ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಕಾರ್ಯದರ್ಶಿಗಳಾದ ಜಗದೀಶ್ಚಂದ್ರ ಡಿ ಕೆ, ಶ್ರೀ ಗು ನಾ ಸ್ವಾ ಸೇ ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಊರ, ಕೇಂದ್ರ ಸಮಿತಿ ನಾಮನಿರ್ದೇಶಿತ ಸದಸ್ಯರದ ಸುರೇಶ್ ಅಂಡಿಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಗುಲಾಬಿ ಹಾಗೂ ಕಮಲರವರನ್ನು ಸನ್ಮಾನಿಸಲಾಯಿತು.

ಘಟಕದ ಸಲಹೆಗಾರರಾದ ರಾಕೇಶ್ ಕುಮಾರ್ ಮೂಡುಕೋಡಿ ಸನ್ಮಾನಿತರ ಪರಿಚಯ ಮಾಡಿದರು.ಘಟಕದ ನಿರ್ದೇಶಕರಾದ ಸುರೇಂದ್ರ ಕೋಟ್ಯಾನ್ ಪ್ರಾರ್ಥನೆ ನಡೆಸಿದರು. ಘಟಕದ ಸ್ಥಾಪಕಧ್ಯಕ್ಷರಾದ ನಿತೀಶ್ ಎಚ್ ಸ್ವಾಗತಿಸಿದರು. ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ ಧನ್ಯವಾದವಿತ್ತರು.ಘಟಕದ ಮಾಜಿ ಅಧ್ಯಕ್ಷರಾದ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿದರು.

ವೇದಿಕೆಯಲ್ಲಿ ಕೊಕ್ರಾಡಿ ಕಾಲೇಜಿನ ಮಕ್ಕಳಿಂದ ಆಟಿ ಕಲೆಂಜ ನೃತ್ಯ ಪ್ರದರ್ಶನಗೊಂಡಿತು

Related posts

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!