23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

ವೇಣೂರು: ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆ 11ರಂದು ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಶುಭಕರ್ ಸಾವ್ಯ ವಹಿಸಿದ್ದರು.

ಉದ್ಘಾಟನೆಯನ್ನು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಅಧ್ಯಕ್ಷರಾದ ಮಂಜಪ್ಪ ಪೂಜಾರಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್, ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಕಾರ್ಯದರ್ಶಿಗಳಾದ ಜಗದೀಶ್ಚಂದ್ರ ಡಿ ಕೆ, ಶ್ರೀ ಗು ನಾ ಸ್ವಾ ಸೇ ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಊರ, ಕೇಂದ್ರ ಸಮಿತಿ ನಾಮನಿರ್ದೇಶಿತ ಸದಸ್ಯರದ ಸುರೇಶ್ ಅಂಡಿಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಗುಲಾಬಿ ಹಾಗೂ ಕಮಲರವರನ್ನು ಸನ್ಮಾನಿಸಲಾಯಿತು.

ಘಟಕದ ಸಲಹೆಗಾರರಾದ ರಾಕೇಶ್ ಕುಮಾರ್ ಮೂಡುಕೋಡಿ ಸನ್ಮಾನಿತರ ಪರಿಚಯ ಮಾಡಿದರು.ಘಟಕದ ನಿರ್ದೇಶಕರಾದ ಸುರೇಂದ್ರ ಕೋಟ್ಯಾನ್ ಪ್ರಾರ್ಥನೆ ನಡೆಸಿದರು. ಘಟಕದ ಸ್ಥಾಪಕಧ್ಯಕ್ಷರಾದ ನಿತೀಶ್ ಎಚ್ ಸ್ವಾಗತಿಸಿದರು. ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ ಧನ್ಯವಾದವಿತ್ತರು.ಘಟಕದ ಮಾಜಿ ಅಧ್ಯಕ್ಷರಾದ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿದರು.

ವೇದಿಕೆಯಲ್ಲಿ ಕೊಕ್ರಾಡಿ ಕಾಲೇಜಿನ ಮಕ್ಕಳಿಂದ ಆಟಿ ಕಲೆಂಜ ನೃತ್ಯ ಪ್ರದರ್ಶನಗೊಂಡಿತು

Related posts

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
error: Content is protected !!