23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Related posts

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!