September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Related posts

ಜಡಿಮಳೆ:ಸುಲ್ಕೇರಿಮೊಗ್ರು ವರ್ಪಾಳೆ, ಪಂಜಾಲಗುಡ್ಡೆ, ಪೋರಿಜ ಸಂಪರ್ಕ ರಸ್ತೆ ಕಡಿತ

Suddi Udaya

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!