22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಹಾರ್ಮೋನ್ ಪರೀಕ್ಷೆ, ಬಂಜೆತನ ಪರೀಕ್ಷೆ ಮತ್ತು ಸೋಂಕು ರೋಗಗಳ ಪತ್ತೆಗಾಗಿ ಕೆಮಿಲುಮಿನೆಸೆನ್ಸ್ ಇಮ್ಯೂನೊಲಿಸೆ ಸಿಎಲ್-9೦೦ಐ ಎಂಬ ಅತ್ಯಾಧುನಿಕ ಯಂತ್ರವನ್ನು ಆ. 5ರಂದು ಅಳವಡಿಸಲಾಯಿತು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪ್ರಸ್ತುತ ಅಳವಡಿಸಿರುವ ಸಿಎಲ್-೯೦೦ಐ ಯಂತ್ರ ಅತ್ಯಂತ ಹೆಚ್ಚು ನಿಖರವಾಗಿ ಮತ್ತು ಅತೀ ಶೀಘ್ರವಾಗಿ ಫಲಿತಾಂಶ ನೀಡಬಲ್ಲದು.


ಇಲ್ಲಿ ಈಗಾಗಲೇ ಟೈಪ್-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-೨ ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ವರದಿ: ನಾರಾಯಣ. ಬಿ

Related posts

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!