25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಹಾರ್ಮೋನ್ ಪರೀಕ್ಷೆ, ಬಂಜೆತನ ಪರೀಕ್ಷೆ ಮತ್ತು ಸೋಂಕು ರೋಗಗಳ ಪತ್ತೆಗಾಗಿ ಕೆಮಿಲುಮಿನೆಸೆನ್ಸ್ ಇಮ್ಯೂನೊಲಿಸೆ ಸಿಎಲ್-9೦೦ಐ ಎಂಬ ಅತ್ಯಾಧುನಿಕ ಯಂತ್ರವನ್ನು ಆ. 5ರಂದು ಅಳವಡಿಸಲಾಯಿತು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪ್ರಸ್ತುತ ಅಳವಡಿಸಿರುವ ಸಿಎಲ್-೯೦೦ಐ ಯಂತ್ರ ಅತ್ಯಂತ ಹೆಚ್ಚು ನಿಖರವಾಗಿ ಮತ್ತು ಅತೀ ಶೀಘ್ರವಾಗಿ ಫಲಿತಾಂಶ ನೀಡಬಲ್ಲದು.


ಇಲ್ಲಿ ಈಗಾಗಲೇ ಟೈಪ್-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-೨ ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ವರದಿ: ನಾರಾಯಣ. ಬಿ

Related posts

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!