ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ನಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಪ್ರಾಯೋಜಕತ್ವದಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಉಪನ್ಯಾಸ ಮಾಲೆ – 5 ಅರಿವಿನ ದೀವಿಗೆ ಕಾರ್ಯಕ್ರಮವು ಆ.14ರಂದು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ), ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ , ಗೌರವ ಉಪಸ್ಥಿತಿ ಶ್ರೀಮತಿ ಸೋನಿಯಾ ಯಶೋವರ್ಮ, ನಿನಾದ, ಉಜಿರೆ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ನವನೀತ ಶೆಟ್ಟಿ, ಕದ್ರಿ ಸಂಸ್ಕೃತಿ ಚಿಂತಕರು ಮಂಗಳೂರು ಇವರು ತುಳುವ ಸಂಸ್ಕೃತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Leave a Comment

error: Content is protected !!