23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಆ.11ರಂದು ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ. ವಿ. ಶೆಟ್ಟಿ ಉದ್ಘಾಟಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ. ವಿ. ಶೆಟ್ಟಿ ಹೇಳಿದರು.ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.


ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!