22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ರವರ ಅಧ್ಯಕ್ಷತೆಯಲ್ಲಿ ಆ.12 ರಂದು ಪುದುವೆಟ್ಟು ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜಕಲ್ಯಾಣ ಇಲಾಖಾ ಅಧಿಕಾರಿ ಹೇಮಚಂದ್ರ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಪೂರ್ಣಾಕ್ಷ ಬಿ, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಬೇಬಿ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಸಿಬ್ಬಂದಿ ಉಷಾಪ್ರಭ ವರದಿ ವಾಚಿಸಿದರು. ಸಿಬ್ಬಂದಿ ರವಿಶಂಕರ್ ನಿರೂಪಿಸಿದರು.

Related posts

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!