September 6, 2026
ಪ್ರತಿಭಟನೆಪ್ರಮುಖ ಸುದ್ದಿ

ಬೆಂಗಳೂರು ಚಲೋ ದಲ್ಲಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರು ಭಾಗಿ

ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಧರಣಿ ಸತ್ಯಾಗ್ರಹದಲ್ಲಿ ಬೆಳ್ತಂಗಡಿ ತಾಲೂಕಿನ 50 ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡು ಬೆಂಬ ಸೂಚಿಸಿದರು.
ರಾಜ್ಯದ ಶಿಕ್ಷಕರ ಬೇಡಿಕೆಗಳೇನು?
1) 2017 ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಿ,ಪದವಿ ಪೂರ್ಣಗೊಳಿಸಿರುವ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು ಪದನಾಮೀಕರಿಸುವುದು.
2) ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು.
3)ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.
ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಈಗಾಗಲೇ ತಾಲೂಕು, ಜಿಲ್ಲಾ ಹಂತದಲ್ಲಿ ಸರಕಾರಕ್ಕೆ ಮನವಿ ಅಭಿಯಾನ ನಡೆಸಿದ್ದು,ಅಂತಿಮವಾಗಿ ಇಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಧರಣಿಯಲ್ಲಿ ಸುಮಾರು ಒಂದು ಲಕ್ಷದಷ್ಟು ಶಿಕ್ಷಕರು ಭಾಗಿಯಾಗಿ ಸರಕಾರದ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.ಬೆಳ್ತಂಗಡಿ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಎಚ್.ಕೆ,ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್ ನೇತೃತ್ವದಲ್ಲಿ, ಜಿಲ್ಲಾ ಖಜಾಂಚಿ ರಾಜೇಶ್ ನೆಲ್ಯಾಡಿ,ಜಿಲ್ಲಾ ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ,ತಾಲೂಕಿನ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮಂಗಳಾ,ಕೆ,ಸಹಕಾರ್ಯದರ್ಶಿ ದಿನೇಶ್ ನಾಯಕ್ ಸೇರಿದಂತೆ ಅನೇಕ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya
error: Content is protected !!