23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ ಮಲೆನಾಡಿನ ರೈತರಲ್ಲಿ ಗೊಂದಲ ಹಾಗೂ ಭಯಮೂಡಿದೆ ಈ ಬಗ್ಗೆ ಕೃಷಿಕರಲ್ಲಿ ಮೂಡಿರುವ ಭಯ ಹೋಗಲಾಡಿಸಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಕೆ.ಎಸ್.ಎಂ.ಸಿ. ಎ ವತಿಯಿಂದ ಸಂಘಟನೆಯ ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ತಮ್ಮ ಬದುಕನ್ನು ಕೃಷಿಭೂಮಿಯನ್ನು ಕಳೆದುಕೊಳ್ಳಬೇಕಾಗಲಿದೆ ಹಾಗೂ ತನ್ನಷ್ಟಕ್ಕೆ ಒಕ್ಕಲೇಳುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಭಯ ಸಾವಿರಾರು ಮಂದಿಯಲ್ಲಿದೆ.ಈ ಹಿನ್ನಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಸಾದಕ – ಭಾದಕ ಗಳ ಬಗ್ಗೆ ಮರು ಚಿಂತನೆ ನಡೆಸಿ ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಿ ಪಶ್ಚಿಮ ಘಟವನ್ನು ರಕ್ಷಣೆ ಮಾಡಬೇಕಾಗಿದೆ. ಪಶ್ಚಿಮ ಘಟದ ಜನವಾಸ ಯೋಗ್ಯವಲ್ಲದ ಪ್ರದೇಶದಲ್ಲಿರುವ ಜನರಿಗೆ ಬೇಕಾದ ಮಾಹಿತಿ ನೀಡಿ ಅಂತವರಿಗೆ ವಸತಿ ಹಾಗೂ ಪರಿಹಾರವನ್ನು ನೀಡುವ ಯೋಜನೆ ಯನ್ನು ರೂಪಿಸಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಕು ಎಂದು ಅಗ್ರಹಿಸಿದರು.

ಆ. 11 ರಂದು ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಸಂಘಟನೆಯ ವತಿಯಿಂದ‌ ಸನ್ಮಾನಿಸಿ ಬಳಿಕ ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ ಎ ಮುಖಂಡರುಗಳಾದ ಸೇಬಸ್ಟಿಯನ್ ಮಲಯಾಟಿಲ್, ಜೈಸನ್ ಪಟ್ಟೀರಿ, ಟೊಮಿ ವೈಪನ, ರೆಜಿ ಬೆಳ್ತಂಗಡಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈಬಗ್ಗೆ ಸರಕಾರದ ಮಟ್ಟದಲ್ಲಿ ಸಚಿವರುಗಳೊಂದಿಗೆ ಮಾತುಕತೆ ನಡೆಸಿ ಸಭೆ ಕರೆದು ನಿಮ್ಮ ಅಹವಾಲುಗಳನ್ನು ಅವರಿಗೆ ತಿಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಐವನ್ ಡಿಸೋಜ ಅವರು ಭರವಸೆ ನೀಡಿದರು.

Related posts

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!