July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ ಮಲೆನಾಡಿನ ರೈತರಲ್ಲಿ ಗೊಂದಲ ಹಾಗೂ ಭಯಮೂಡಿದೆ ಈ ಬಗ್ಗೆ ಕೃಷಿಕರಲ್ಲಿ ಮೂಡಿರುವ ಭಯ ಹೋಗಲಾಡಿಸಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಕೆ.ಎಸ್.ಎಂ.ಸಿ. ಎ ವತಿಯಿಂದ ಸಂಘಟನೆಯ ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ತಮ್ಮ ಬದುಕನ್ನು ಕೃಷಿಭೂಮಿಯನ್ನು ಕಳೆದುಕೊಳ್ಳಬೇಕಾಗಲಿದೆ ಹಾಗೂ ತನ್ನಷ್ಟಕ್ಕೆ ಒಕ್ಕಲೇಳುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಭಯ ಸಾವಿರಾರು ಮಂದಿಯಲ್ಲಿದೆ.ಈ ಹಿನ್ನಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಸಾದಕ – ಭಾದಕ ಗಳ ಬಗ್ಗೆ ಮರು ಚಿಂತನೆ ನಡೆಸಿ ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಿ ಪಶ್ಚಿಮ ಘಟವನ್ನು ರಕ್ಷಣೆ ಮಾಡಬೇಕಾಗಿದೆ. ಪಶ್ಚಿಮ ಘಟದ ಜನವಾಸ ಯೋಗ್ಯವಲ್ಲದ ಪ್ರದೇಶದಲ್ಲಿರುವ ಜನರಿಗೆ ಬೇಕಾದ ಮಾಹಿತಿ ನೀಡಿ ಅಂತವರಿಗೆ ವಸತಿ ಹಾಗೂ ಪರಿಹಾರವನ್ನು ನೀಡುವ ಯೋಜನೆ ಯನ್ನು ರೂಪಿಸಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಕು ಎಂದು ಅಗ್ರಹಿಸಿದರು.

ಆ. 11 ರಂದು ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಸಂಘಟನೆಯ ವತಿಯಿಂದ‌ ಸನ್ಮಾನಿಸಿ ಬಳಿಕ ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ ಎ ಮುಖಂಡರುಗಳಾದ ಸೇಬಸ್ಟಿಯನ್ ಮಲಯಾಟಿಲ್, ಜೈಸನ್ ಪಟ್ಟೀರಿ, ಟೊಮಿ ವೈಪನ, ರೆಜಿ ಬೆಳ್ತಂಗಡಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈಬಗ್ಗೆ ಸರಕಾರದ ಮಟ್ಟದಲ್ಲಿ ಸಚಿವರುಗಳೊಂದಿಗೆ ಮಾತುಕತೆ ನಡೆಸಿ ಸಭೆ ಕರೆದು ನಿಮ್ಮ ಅಹವಾಲುಗಳನ್ನು ಅವರಿಗೆ ತಿಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಐವನ್ ಡಿಸೋಜ ಅವರು ಭರವಸೆ ನೀಡಿದರು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya
error: Content is protected !!