23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಬಂಟರ ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವ ಅಗತ್ಯತೆ ಇದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳ ಆಯೋಜನೆ ಬಹಳ ಅರ್ಥಪೂರ್ಣವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಠಲ ಶೆಟ್ಟಿ “ಶ್ರದ್ಧಾ” ಲಾಯಿಲ, ವಸಂತ ಶೆಟ್ಟಿ “ಶ್ರದ್ಧಾ” ಶುಭ ಹಾರೈಸಿದರು. ಸದಾನಂದ ಕರ್ನೊಡಿ, ಪುಷ್ಪ ಶೆಟ್ಟಿ ಪರಂಟಾಜೆ, ಮೋನಪ್ಪ ಶೆಟ್ಟಿ ಎಣಿಂಜೆ ವೇದಿಕೆಯಲ್ಲಿದ್ದರು. ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಹಾಗೂ ಬಂಟ ಭಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಗ್ರಾಮದ ವಿವಿಧ ಮನೆಯವರು ತಯಾರಿಸಿ ತಂದಿದ್ದ ಸುಮಾರು 30 ಬಗೆಯ ವಿವಿಧ ಆಹಾರ ಖಾಧ್ಯಗಳ ಸವಿಯನ್ನು ಸಭೆಯಲ್ಲಿ ಸೇರಿದ್ದವರು ಸವಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಾಪಕ ಸುರೇಶ್ ಶೆಟ್ಟಿ ಕೊಡೈಲು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ಎಣಿಂಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು. ಪ್ರಸಾದ್‌ ಶೆಟ್ಟಿ ಎಣಿಂಜೆ ಧನ್ಯವಾದವಿತ್ತರು.

Related posts

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya
error: Content is protected !!