32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವು ಆ. 12ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಪಿ.ಕೆ. ಮಾತನಾಡಿ ವಕೀಲರ ಹಾಗೂ ನ್ಯಾಯಾಧೀಶರ ಸಂಬಂಧ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಕೆಲಸವನ್ನು ಮಾಡಬೇಕು ಎಂದು ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಸಿವಿಲ್ ನ್ಯಾಯಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿಜಯೇಂದ್ರ ಟಿ.ಎಚ್. ಉಪಸ್ಥಿತರಿದ್ದರು.

ವಕೀಲರ ಸಂಘದದ ಮಾಜಿ ಕಾರ್ಯದರ್ಶಿ ಮನೋಹರ ಕುಮಾರ್ ಎ. ನಿರೂಪಿಸಿದರು. ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಸ್ವಾಗತಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಧನ್ಯವಾದವಿತ್ತರು.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!