22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!