ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Leave a Comment

error: Content is protected !!