38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya
error: Content is protected !!