July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!