22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Related posts

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya
error: Content is protected !!